ಇತ್ತೀಚಿನ ಸುದ್ದಿ
Trending

ವಿಧಾನಸೌಧ ವೀಕ್ಷಣೆಗೂ ಶುಲ್ಕ! ರಾಷ್ಟ್ರಪತಿ-ಸಂಸತ್ ಭವನ ಮಾದರಿಯಲ್ಲಿ ಟೂರ್​ ಗೈಡ್​ ವ್ಯವಸ್ಥೆ

ಬೆಂಗಳೂರು, ಏಪ್ರಿಲ್​ 08: ರಾಷ್ಟ್ರಪತಿ ಭವನ (Rashtrapati Bhavan) ಮತ್ತು ಸಂಸತ್ ಭವನದ (Sansat Bhavan) ಮಾದರಿಯಲ್ಲಿ ವಿಧಾನಸೌಧ (Vidhansoudha) ವೀಕ್ಷಣೆಗೆ ಪ್ರವಾಸಿಗರಿಂದ ಶುಲ್ಕ ವಸೂಲಿಗೆ ರಾಜ್ಯ ಸರ್ಕಾರ (Karnataka Government) ಮುಂದಾಗಿದೆ. ಪ್ರವಾಸೋದ್ಯಮ ಇಲಾಖೆಯ ಮೂಲಕ ವಿಧಾನಸೌಧ ವೀಕ್ಷಣೆಗೆ ಟೂರ್​ ಗೈಡ್​ ಏರ್ಪಡಿಸಲಾಗಿದೆ. ಸಾರ್ವತ್ರಿಕ ರಜಾ ದಿನಗಳಂದು ಮಾತ್ರ ಟೂರ್​ ಗೈಡ್​ ವ್ಯವಸ್ಥೆ ಇರುತ್ತದೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರವಾಸಿಗರು ಶುಲ್ಕ ಪಾವತಿಸಿ ವಿಧಾನಸೌಧ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

ವಿಧಾನಸೌಧ ಕಟ್ಟಡಕ್ಕೆ ಪ್ರಸ್ತುತ ಶಾಶ್ವತ ದೀಪಾಲಂಕಾರ ವ್ಯವಸ್ಥೆಯನ್ನು ಮಾಡಲಾಗಿದೆ. ಇದರಿಂದ, ಕಟ್ಟಡದ ಸೌಂದರ್ಯವು ಹೆಚ್ಚಾಗಿದ್ದು, ಪ್ರವಾಸಿಗರು ವಿಧಾನಸೌಧವನ್ನು ವೀಕ್ಷಿಸಲು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ವಿಧಾನಸೌಧ ಕಟ್ಟಡ ವೀಕ್ಷಿಸಲು “Guided Tour” ವ್ಯವಸ್ಥೆ ಮಾಡಲಾಗಿದ್ದು, ಇದರಿಂದ ವಿದೇಶಿ ಮತ್ತು ದೇಶಿಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ.

  • ಸಾರ್ವತ್ರಿಕ ರಜಾ ದಿನಗಳಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರವಾಸಿಗರು ವಿಧಾನಸೌಧ ವೀಕ್ಷಣೆಗೆ ಅವಕಾಶ ನೀಡಲಾಗಿದೆ.
  • ವಿಧಾನಸೌಧ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರನ್ನು ತಲಾ 30 ರಂತೆ ತಂಡಗಳನ್ನಾಗಿ ವಿಭಜಿಸಿ, ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತದೆ. ಹಾಗೂ ಈ ಪ್ರತಿ ತಂಡಗಳ ಮೇಲ್ವಿಚಾರಣೆ ಮಾಡಲು ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಅಧಿಕಾರಿಗಳು (Tourist Officer) ಇರುತ್ತಾರೆ. ಹಾಗೂ ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಇವರನ್ನು ಉಸ್ತುವಾರಿ ಅಧಿಕಾರಿಯನ್ನಾಗಿ ನೇಮಿಸಲಾಗುತ್ತದೆ.
  • Guided Tour ಗೆ ಅನುವಾಗುವಂತೆ ಪ್ರವಾಸಿಗರು Online ಮುಖಾಂತರ ticket ಪಡೆಯಲು ಪ್ರವಾಸೋದ್ಯಮ ಇಲಾಖೆ ತಂತ್ರಾಂಶ ಅಭಿವೃದ್ಧಿ ಪಡಿಸುತ್ತಿದೆ.
  • ಪ್ರವಾಸಿಗರಿಗೆ ನಿಗದಿಪಡಿಸುವ ಪ್ರವೇಶ ದರವು ಜನಸ್ನೇಹಿಯಾಗಿದೆ. ಹಾಗೂ ವಸೂಲಿ ಮಾಡುವ ಪ್ರವೇಶ ಶುಲ್ಕದಲ್ಲಿ ನಿರ್ದಿಷ್ಟ ಶುಲ್ಕವನ್ನು ಪ್ರವಾಸೋದ್ಯಮ ಇಲಾಖೆಗೆ ಸೇರಲಿದೆ.
  • ಉಪ ಪೊಲೀಸ್ ಆಯುಕ್ತರು, ವಿಧಾನಸೌಧ ಭದ್ರತೆ ಇವರು ಭದ್ರತೆಗೆ ಸಂಬಂಧಿಸಿದಂತೆ ನೀಡುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
  • ಪ್ರವಾಸಿಗರ ಅಧಿಕೃತ ಗುರುತಿನ ಚೀಟಿಯನ್ನು ಪರಿಶೀಲಿಸಿ, ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.
  • ವಿಧಾನಸೌಧ ಕಟ್ಟಡ/ ಉದ್ಯಾನವನಗಳು/ಪ್ರತಿಮೆಗಳಿಗೆ ಯಾವುದೇ ದಕ್ಕೆ ಉಂಟಾಗದಂತೆ ಎಚ್ಚರಿಕ ವಹಿಸಬೇಕು. ಹಾಗೂ ಈ ಕುರಿತು ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲಾಗುತ್ತದೆ.
  • ವೀಕ್ಷಣೆಗೆ ಆಗಮಿಸುವ ಪ್ರವಾಸಿಗರ ಪರಿವೀಕ್ಷಣೆಯ ಕುರಿತು ರೂಟ್ ಮ್ಯಾಪ್ (Root Map/Lay out map) ವ್ಯವಸ್ಥೆ ಇದೆ.
  • ಪರಿವೀಕ್ಷಣೆಯ ಸಂದರ್ಭದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಸುಸಜ್ಜಿತ ವೈದ್ಯಕೀಯ ತಂಡದೊಂದಿಗೆ ಆಂಬ್ಯುಲೆನ್ಸ್ ಸೌಲಭ್ಯವನ್ನು ಕಲ್ಪಿಸಲು ಆರೋಗ್ಯ ಇಲಾಖೆ ಮುಂದಾಗಿದೆ.
  • ಅಗ್ನಿ ಅವಘಡ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಗ್ನಿ ಶಾಮಕ ಇಲಾಖೆಯರು ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸಿದ್ಧರಿರತಕ್ಕದ್ದು.
  • ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ವಿಧಾನಸೌಧದ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು.

Related Articles

Leave a Reply

Your email address will not be published. Required fields are marked *

Back to top button